ಜಯನಗರ ಅಂಗನವಾಡಿ ಕೇಂದ್ರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

0

ಜಯನಗರ ಅಂಗನವಾಡಿ ಕೇಂದ್ರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

ನ ಪಂ ಸದಸ್ಯರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ ಭಟ್ ಕೊಡಂಕೇರಿ ರವರು ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನದ ಸಂದೇಶ ಭಾಷಣವನ್ನು ಮಾಡಿದರು.

ಅಂಗನವಾಡಿ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿ ಮಾತನಾಡಿ ಶುಭಾಶಯಗಳನ್ನು ನೀಡಿದರು.
ಈ ಸಂಧರ್ಭದಲ್ಲಿ ಅಂಗನವಾಡಿ ರಕ್ಷಣಾ ಸಮಿತಿ ಅಧ್ಯಕ್ಷ ಮಿಶ್ರಿಯ, ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಎ ಎಂ, ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಅಬಹಿ ಕುಮಾರ್,ಮಾಜಿ ಅಧ್ಯಕ್ಷ ಪ್ರಸನ್ನ ಎಂ ಆರ್, ಹಾಲಿ ಕೋಶಾಧಿಕಾರಿ ಅಭಿಷೇಕ್, ಕಾರ್ಯದರ್ಶಿ ವರುಣ್, ಹಾಗೂ ಶ್ರೀ ಗಜಾನನ ಭಜನಾ ಮಂದಿರದ ಸದಸ್ಯರು, ಜಯನಗರ ಮದರಸ ಸಮಿತಿ ಸದಸ್ಯರು,ಮತ್ತು ಸ್ಥಳೀಯರು ಭಾಗವಹಿಸಿದ್ದರು.

ಪ್ರವೀಣ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.