ಕೊಡಿಯಾಲ : ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ವತಿಯಿಂದ ಮೂವಪ್ಪೆ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

0

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವನ್ನು 78 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ವಿತರಿಸಲಾಯಿತು.


ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆ ಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ನಿವೃತ್ತ ಉಪವಲಯರಣ್ಯಾಧಿಕಾರಿ ಕುಶಾಲಪ್ಪ ಗೌಡ ಕಲ್ಪಡ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷರಾದ ಶೇಷಪ್ಪ ಗೌಡ ಗುತ್ತು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರ್ಷನ್ ಕೆ.ಟಿ., ಉಳ್ಳಾಕುಲು ದೈವಸ್ಥಾನ ಕಲ್ಪಡ ಇದರ ಮೋಕ್ತೇಸರರಾದ ಶಿವರಾಮ ಉಪಾಧ್ಯಾಯ, ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸುಬ್ರಹ್ಮಣ್ಯ ಕೆ. ಎಂ., ಕೊಡಿಯಾಲ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರಾದ ಪ್ರವೀಣ್ ಕುಮಾರ್ ಸಿ.ವಿ.,


ಅಶ್ವಿನ್ ಕುಮಾರ್ ನಟ್ಟಿಹಿತ್ಲು, ರಾಮಣ್ಣ ಗೌಡ ಕೊಡೆಂಕಿರಿ, ಭಾಸ್ಕರ ತೋಟ, ದೇವಿಪ್ರಸಾದ್ ಗುತ್ತು, ಪ್ರಸಾದ್ ಕಲ್ಪಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ನ ವತಿಯಿಂದ ಕ್ರೀಡಾ ಸಮವಸ್ತ್ರ ವನ್ನು ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.