ಐವರ್ನಾಡು ಪ್ರಾ.ಕೃ.ಪ.ಸ.ಸಂಘಕ್ಕೆ ಡಿ.ಸಿ‌.ಸಿ ಬ್ಯಾಂಕಿನಿಂದ ಪಾರಿತೋಷಕ ಪ್ರಶಸ್ತಿ – ಸನ್ಮಾನ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಶೇ.100 ಸಾಲ ವಸೂಲಾತಿ ಸಾಧನೆಗೆ ಪಾರಿತೋಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ರವರು ಸಂಘದ ಅಧ್ಯಕ್ಷ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಇವರನ್ನು ಶಾಲು ,ಹೊದಿಸಿ,ಪಾರಿತೋಷಕ ಪ್ರಶಸ್ತಿ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕರಾದ ಸತೀಶ್ ಎಡಮಲೆ,ವಾಸುದೇವ ಬೊಳುಬೈಲು,ಪುರಂದರ ಶಾಂತಿಮೂಲೆ,ಭವಾನಿ ಎಂ.ಸಿ, ಚಂದ್ರಶೇಖರ,ಮಹೇಶ ಜಬಳೆ,ಸರಸ್ವತಿ ಹಾಗೂ ಸಿಬ್ಬಂದಿಗಳಾದ ಭೋಜಪ್ಪ,ಪೂಜಾ ಶ್ರೀ ಕೆ.ಕೀರ್ತನ್ ಎಸ್, ದೇಶಿತ್ ಉಪಸ್ಥಿತರಿದ್ದರು.