ಪಾಲೆಪ್ಪಾಡಿ : ಬೃಹತ್ ಸ್ವಚ್ಛತಾ ಕಾರ್ಯಕ್ರಮ

0

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಐವರ್ನಾಡು ಗ್ರಾಮದ ಮಂಜುಶ್ರೀ ಗೆಳೆಯರ ಬಳಗ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿ ವತಿಯಿಂದ ರಸ್ತೆ ಬದಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.


ಮುಚ್ಚಿನಡ್ಕ-ಪಾಲೆಪ್ಪಾಡಿ ಅಮಲ ರಸ್ತೆಯ ಇಕ್ಕೆಲಗಳಲ್ಲಿ ಮರದ ಕೊಂಬೆಗಳ ಗಿಡಬಳ್ಳಿಗಳು ರಸ್ತೆ ಮಧ್ಯಕ್ಕೆ ಆವರಿಸಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಇದನ್ನು ಮನಗಂಡ ಮಂಜುಶ್ರೀ ಗೆಳೆಯರ ಬಳಗ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿ ಇದರ ಪದಾಧಿಕಾರಿಗಳು ಮತ್ತು ಸದಸ್ಯರು ಜಂಟಿಯಾಗಿ ಸೇರಿಕೊಂಡು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸುವುದರ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
78 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಆಚರಣೆಯೆಂಬಂತೆ ಮಂಜುಶ್ರೀ ಗೆಳೆಯರ ಬಳಗ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿ ವತಿಯಿಂದ ಕೈಗೊಂಡ ರಸ್ತೆ ಬದಿ ಸ್ವಚ್ಚತಾ ಕಾರ್ಯಕ್ರಮವು ವಿಭಿನ್ನ ರೀತಿಯ ಆಚರಣೆಗೆ ಸಾಕ್ಷಿಯಾಯಿತು.