ಆ.25 : ಬೆಳ್ಳಾರೆಯಲ್ಲಿ ಸುಳ್ಯ ಕುಲಾಲ ಸುಧಾರಕ ಸೇವಾ ಸಂಘದ ವಾರ್ಷಿಕ ಮಹಾಸಭೆ

0

ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.25 ರಂದು ಬೆಳ್ಳಾರೆ ದೇವಿ ಹೈಟ್ಸ್ ನ ಸಭಾಂಗಣದಲ್ಲಿ ನಡೆಯಲಿದೆ.
ಕುಲಾಲ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ಮಹಾಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಮಂಗಳೂರಿನ ನ್ಯಾಯವಾದಿ ಹಾಗೂ ಕುಲಶೇಖರ ಧರ್ಮಶಾಸ್ತ ಮಂದಿರ ಟ್ರಸ್ಟ್ ಅಧ್ಯಕ್ಷ ರಾಮ್ ಪ್ರಸಾದ್ ಎಸ್,ಮಂಗಳೂರು ಸಂಧ್ಯಾ ಕಾಲೇಜು ಉಪನ್ಯಾಸಕಿ ಶ್ರೀಮತಿ ಆಶಾಲತಾ ಉಪಸ್ಥಿತರಿರುವರು.
ಸಂಘದ ಸದಸ್ಯರು,ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಹಕಾರ ,ಸಲಹೆಗಳನ್ನಿತ್ತು ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಕಾರ್ಯದರ್ಶಿ ಧನಂಜಯ ಕುಲಾಲ್ ತಿಳಿಸಿದ್ದಾರೆ.