ಬೆಳ್ಳಾರೆ ಶ್ರೀ ಸದಾಶಿವ ಶಿಶು ಮಂದಿರದ ಆಶ್ರಯದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಶ್ರೀ ಸದಾಶಿವ ಶಿಶು ಮಂದಿರ ಬೆಳ್ಳಾರೆ ಇದರ ಆಶ್ರಯದಲ್ಲಿ ನಿವೇದಿತ ಸಂಚಲನ ಸಮಿತಿ ಬೆಳ್ಳಾರೆ ಇದರ ಸಹಯೋಗದೊಂದಿಗೆ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 16ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಬೆಳಿಗ್ಗೆ ಕಲಶ ಸ್ಥಾಪನೆ, ಪಾರಾಯಣ, ಕುಂಕುಮಾರ್ಚನೆ, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ, ಹಿರಿಯರಾದ ಮಹಾಲಿಂಗ ಭಟ್ ಕುರುಂಬುಡೇಲು, ಸೊಸೈಟಿ ಕಾರ್ಯದರ್ಶಿ ಶ್ರೀರಾಮ ಪಾಟಾಜೆ ಸೇರಿದಂತೆ ಸೊಸೈಟಿ ಸದಸ್ಯರು, ನಿವೇದಿತಾ ಸಂಚಲನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು.