ಚೊಕ್ಕಾಡಿ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ವತಿಯಿಂದ ಸೋಣಂಗೇರಿಯಲ್ಲಿ ಬಸ್ಸು ತಂಗುದಾಣ ನಿರ್ಮಾಣಕ್ಕೆ ಜಾಲ್ಸೂರು ಗ್ರಾ.ಪಂ.ಗೆ ಮನವಿ

0

ಸುಳ್ಯ ತಾಲೂಕಿನ ಪ್ರಮುಖ ಜಂಕ್ಷನ್ ಆಗಿರುವ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಪ್ರಯಾಣಿಕರ ಬಸ್ಸು ತಂಗುದಾಣ ನಿರ್ಮಾಣಕ್ಕೆ ಚೊಕ್ಕಾಡಿ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ವತಿಯಿಂದ ಜಾಲ್ಸೂರು ಗ್ರಾ.ಪಂ.ಗೆ ಆ.16ರಂದು ಮನವಿ ಸಲ್ಲಿಸಲಾಯಿತು.

ಸೋಣಂಗೇರಿಯಲ್ಲಿ ಕಳೆದ ವರ್ಷ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಬಸ್ಸು ತಂಗುದಾಣ ಹಾಗೂ ಸಾರ್ವಜನಿಕ ಶೌಚಾಲಯವನ್ನು ತೆರವುಗೊಳಿಸಲಾಗಿತ್ತು.

ಇದೀಗ ಭಗವಾನ್ ಶ್ರೀ ಸತ್ಯಸಾಯಿ ಬಾಬರವರ ಜನ್ಮಶತಾಬ್ದಿಯ ವರ್ಷದ ಪ್ರಯುಕ್ತ ಭಗವಾನ್ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ವತಿಯಿಂದ ಸೋಣಂಗೇರಿ ಜಂಕ್ಷನ್ ನಲ್ಲಿ ಪ್ರಯಾಣಿಕರ ಅವಶ್ಯಕತೆಗೆ ಮನಗಂಡು ಶುದ್ಧ ಕುಡಿಯುವ ನೀರು, ಶೌಚಾಲಯಗಳು, ಸೌರ ವಿದ್ಯುತ್ ಹಾಗೂ ಒಂದು ಅಂಗಡಿ ಕೋಣೆ ಒಳಗೊಂಡ ಮೂಲಭೂತ ಸೌಕರ್ಯಗಳ ಸುಸಜ್ಜಿತ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸುವುದಾಗಿ ನಿರ್ಣಯಿಸಲಾಗಿದೆ.
ಈ ಕುರಿತು ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ವತಿಯಿಂದ ಜಾಲ್ಸೂರು ಗ್ರಾ.ಪಂ.ಗೆ ಮನವಿ ಸಲ್ಲಿಸಲಾಗಿದ್ದು, ‌ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯೋಗ್ಯ ಸ್ಥಳವನ್ನು ಗುರುತಿಸಿ, ತಂಗುದಾಣ ನಿರ್ಮಾಣಕ್ಕೆ ಅನುಮತಿ ನೀಡಬೇಕೆಂದು ಮನವಿ ಪತ್ರದಲ್ಲಿ ಕೋರಲಾಗಿದೆ.