ಸುಳ್ಯ ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ವತಿಯಿಂದ ಸಾಮೂಹಿಕ ವರ ಮಹಾಲಕ್ಷ್ಮಿ ಪೂಜೆ

0

ಸುಳ್ಯ ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ವರಮಹಾಲಕ್ಷ್ಮೀ ಉತ್ಸವ ಸಮಿತಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16 ರಂದು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸಂಜೆ ನಡೆಯಿತು.

ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ರವರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿತು.
ಈ ಸಂದರ್ಭದಲ್ಲಿ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಆಕರ್ಷಕ ಕುಣಿತ ಭಜನಾ ಸೇವೆಯ ನಡೆಯಿತು. ರಾತ್ರಿ ಮಹಾ ಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯು ನೆರವೇರಿತು.


ವಿ.ಹೆಚ್.ಪಿ ಮಾತೃಮಂಡಳಿ ಅಧ್ಯಕ್ಷ ರುಮತ್ತುಪದಾಧಿಕಾರಿಗಳು ಹಾಗೂ ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪೂಜಾ ಕಾರ್ಯದಲ್ಲಿ ಭಾಗವಹಿಸಿದರು.