ಸಿ.ಎಂ. ಸಿದ್ಧರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ – ರಾಜ್ಯಪಾಲರ ನಡೆ ಖಂಡನೀಯ : ಸುಳ್ಯ ಇಂಟೆಕ್ ಕಾಂಗ್ರೆಸ್

0

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ಜನಪ್ರಿಯತೆಯನ್ನು ಸಹಿಸದ ಕೇಂದ್ರ ಸರಕಾರ ರಾಜ್ಯಪಾಲರ ಮೂಲಕ ಪ್ರಾಷಿಕ್ಯೂಷನ್ ಅನುಮತಿ ನೀಡಿರುವುದು ಖಂಡನೀಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಹೇಳಿದ್ದಾರೆ.

ರಾಜ್ಯಪಾಲರು ಕೇಂದ್ರ ಸರಕಾರದ ಹಾಗೂ ರಾಜ್ಯ‌ ಬಿಜೆಪಿ ಅಧ್ಯಕ್ಷರ ಕೈಗೊಂಬೆಯಂತೆ ವರ್ತಿಸಿದ್ದಾರೆ. ಇದರ‌ ವಿರುದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಇದರಿಂದ ಹಾನಿ ಸಂಭವಿಸಿದರೆ ಅದಕ್ಕೆ ರಾಜ್ಯಪಾಲರೇ ಹೊಣೆ. ಮತ್ತು ಸಿದ್ದರಾಮಯ್ಯರ ಜನಪ್ರಿಯತೆ – ಗ್ಯಾರಂಟಿ ಯೋಜನೆಗಳನ್ನು ಸಹಿಸದ ಕೇಂದ್ರ ಸರಕಾರ ಹಾಗೂ‌ ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಂಡು ಈ ರೀತಿ ಮಾಡುತ್ತಿರುವುದು ತೀರಾ ಖಂಡನೀಯ ಎಂದವರು ಹೇಳಿದ್ದಾರೆ.