ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ, ಭಕ್ತಿಕುಸುಮ ಭಕ್ತಿಗೀತೆ ಬಿಡುಗಡೆ

0

ಬೆಳ್ಳಾರೆಯ ಗೌರಿಪುರಂ
ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಮಾತೃಮಂಡಳಿ ಆಶ್ರಯದಲ್ಲಿ ಆ. 16ರಂದು ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಸೇರಿದಂತೆ ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮಾತೃಮಂಡಳಿಯ ಪದಾಧಿಕಾರಿಗಳು ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾತ್ರಿ ಕು. ತನುಶ ಯಾದವ್ ಪಡ್ಪು ಹಾಡಿರುವ ಶ್ರೀ ರಾಜರಾಜೇಶ್ವರಿ ದೇವಿಯ ‘ಭಕ್ತಿ ಕುಸುಮ’ ಹೊಸ ಭಕ್ತಿ ಗೀತೆಯನ್ನು ದೇವಸ್ಥಾನದ ಅರ್ಚಕರಾದ ಜಯರಾಮ ಬಡಿಕ್ಕಿಲಾಯ ಬಿಡುಗಡೆಗೊಳಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು. ನೂರಾರು ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.