ರಾಜ್ಯಪಾಲರ ಪಕ್ಷಪಾತದ ನಡೆ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಖಂಡನೆ

0

ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಬಡವರ ಪಾಲಿಗೆ ಹಲವಾರು ಭಾಗ್ಯಗಳನ್ನು ಕೊಟ್ಟ ಸರದಾರ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಚುನಾವಣಾ ಪೂರ್ವ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದ ನಾಯಕ. ೪೦ ವರ್ಷಗಳ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆಗಳಲಿಲ್ಲದೆ ರಾಜಕಾರಣ ಮಾಡಿದವರು ಅವರು. ಅಂತವರ ನೇತೃತ್ವದ ಜನಪ್ರಿಯ ಸರಕಾರವನ್ನು ಅಸ್ಥಿರ ಗೊಳಿಸುವಂತಹ ಕೆಲಸ ರಾಜ್ಯಪಾಲರ ಮೂಲಕ ಕೇಂದ್ರ ಸರಕಾರ ನಡೆಸುತ್ತಿದೆ.

ರಾಜ್ಯಪಾಲರು ಕೇಂದ್ರದ ಏಜೆಂಟಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿಯೇ ನ್ಯಾಯಯುತವಾಗಿ ಸಿದ್ಧರಾಮಯ್ಯರ ಪತ್ನಿ ಸೈಟನ್ನು ಪಡೆದಿರುತ್ತಾರೆ.

ಇದನ್ನು ತಿಳಿದೂ ಸರಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮ ಖಂಡನೀಯ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹೇಳಿ ನೀಡಿದ್ದಾರೆ.


ರಾಜ್ಯಪಾಲರ ನಡೆಯನ್ನು ಖಂಡಿಸಿ ನಾಳೆ 19.08.2024 ರ ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಲೇಡಿಹಿಲ್ ಶ್ರೀ ನಾರಾಯಣ ಗುರು ವೃತ್ತದಿಂದ ಆರಂಭವಾಗಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆವರೆಗೆ ಪಾದಯಾತ್ರೆ ನಡೆಸಿ, ಬಳಿಕ ಸ್ಥಳದಲ್ಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಈ ಸಭೆಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸುಳ್ಯ ಬ್ಲಾಕ್ ನಿಂದ ಜನ ಭಾಗವಹಿಸಬೇಕಾಗಿ ಪಿ.ಸಿ.ಜಯರಾಮರು ವಿನಂತಿಸಿದ್ದಾರೆ.