ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ ಹಾಗು ಸಂಗೀತ ವೈಭವ

0

ರಂಗಮಯೂರಿ ಕಲಾಶಾಲೆ (ರಿ.) ಸುಳ್ಯ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ 78 ನೇ ಸ್ವಾತಂತ್ರ್ಯ ಸಂಭ್ರಮ ಹಾಗೂ ಸಂಗೀತ ವೈಭವ ಕಾರ್ಯಕ್ರಮ
ಆ. 17 ರಂದು ನಡೆಯಿತು.

ಕಾರ್ಯಕ್ರಮವನ್ನು ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಅದ್ಯಕ್ಷೆ ಶ್ರೀಮತಿ ಚಿಂತನ ಸುಬ್ರಮ್ಹಣ್ಯ ಉದ್ಘಾಟಿಸಿ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಮಾತನಾಡಿ ” ಇವತ್ತಿನ ಕಾಲಮಾನಕ್ಕೆ ಮಕ್ಕಳಿಗೆ ಕಲೆ ಸಾಹಿತ್ಯದ ಅಗತ್ಯತೆಯ ಬಗ್ಗೆ ” ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಉತ್ತಮ ಕನ್ನಡ ಸಾಧಕ ಪ್ರಶಸ್ತಿ ಪುರಸ್ಕೃತರು, ಸುಳ್ಯದ ಕೆ.ವಿ.ಜಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನ ಕನ್ನಡ ಶಿಕ್ಷಕಿ ಭವ್ಯ .ಎ, ಸುಳ್ಯ ಸೈಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ, ಸುಳ್ಯ ರೋಟರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರೋಹಿಣಿ ಅಂಬೆಕಲ್ಲು, ರಂಗಮಯೂರಿ ಕಲಾಶಾಲೆಯ ಪೋಷಕರಾದ ಭವಾನಿಶಂಕರ ಅಡ್ತಲೆ ಉಪಸ್ಥಿತರಿದ್ದರು.

ರಂಗಮಯೂರಿ ಕಲಾಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು ಪ್ರಸ್ತಾವಿಸಿ, ರಂಗಮಯೂರಿ ಕಲಾಶಾಲೆಯ ಪೋಷಕಿ ಸುನಂದಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ದೃತಿ ದೀಟಿಗೆ ವಂದಿಸಿದರು.
ಕಾರ್ಯಕ್ರಮವನ್ನು ಮೇಘ ಕೃಷ್ಣ ಕಾಯರ್ತೋಡಿ ಹಾಗೂ ಶಶಿಕಾಂತ್ ಮಿತ್ತೂರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ರವರಿಂದ ವಯೊಲಿನ್ ವಾದನ, ರಂಗಮಯೂರಿ ಕಲಾಶಾಲೆಯ ಸುಗಮಸಂಗೀತ ವಿದ್ಯಾರ್ಥಿಗಳಿಂದ ಸಂಗೀತ ವೈಭವ, ಶಿಕ್ಷಕಿ ಸುಮನಾ ರಾವ್ ಪುತ್ತೂರು ರವರ ತರಬೇತಿ ಹಾಗೂ ನಿರ್ದೇಶನದಲ್ಲಿ ಮೂಡಿ ಬಂತು. ಹಿಮ್ಮೇಳನದಲ್ಲಿ ಶುಭಕರ್ ಬೆಟ್ಟಂಪಾಡಿ ಹಾಗೂ ಬಾಲಕೃಷ್ಣ ಮೇನಾಲ ಸಹಕರಿಸಿದರು.