ಪೆರಾಜೆ: ಕುಂದಲ್ಪಾಡಿ ಕುಟುಂಬದ ಅಳಿಯ ಶೇಖರ್ ಗೌಡ ದೇವಸ ಸವಣಾರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ನೇಮಕ

0

ಪೆರಾಜೆ ಗ್ರಾಮದ ಕುಂದಲ್ಪಾಡಿ ಚಂದ್ರಶೇಖರ್ ಗೌಡ ಮತ್ತು ಜಾನಕಿ ದಂಪತಿಗಳ ಪುತ್ರಿ ಚಂದ್ರಕಲಾರವರ ಪತಿ ವಕೀಲ ಶೇಖರ್ ಗೌಡರವರು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ಆಯ್ಕೆಯಾಗಿದ್ದಾರೆ. ಇವರು ಹಲವು ವರ್ಷಗಳಿಂದ ದೆಹಲಿಯಲ್ಲಿ ನೆಲೆಸಿದ್ದು ಸುಪ್ರೀಂ ಕೋರ್ಟ್ ನ ವಕೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರು ಬೆಳ್ತಂಗಡಿ ಸವಣಾರು ಗ್ರಾಮದ ದೇವಸ ಮನೆಯವರಾಗಿದ್ದಾರೆ. ಬೆಂಗಳೂರಿನ ಹೈಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಿದ ಇವರು ಪ್ರಸ್ತುತ ೨೨ ವರ್ಷಗಳಿಂದ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.