ಅರಂಬೂರು: ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.
ಟ್ರಸ್ಟ್ ಸುಳ್ಯ ತಾಲೂಕು ಪರಿವಾರ ಕಾನ ಒಕ್ಕೂಟ ಮತ್ತು ಅರಂಬೂರು ಒಕ್ಕೂಟದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ವತಿಯಿಂದ 14 ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ. 16ರಂದು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಗೋಪಾಲಕೃಷ್ಣ ಸಭಾಭವನದಲ್ಲಿ ಪುರೋಹಿತ ಅಭಿರಾಮ್ ಭಟ್ ಸರಳಿಕುಂಜ ಅವರ ನೇತೃತ್ವದಲ್ಲಿ ನಡೆಯಿತು.

ವರಮಹಾಲಕ್ಷ್ಮಿ ಪೂಜೆಯನ್ನು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ರಿ ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ವಲಯದ ಮೇಲ್ವಿಚಾರಕರಾದ ಜಯಶ್ರೀ, ಸಂಪಾಜೆ ವಲಯದ ಮೇಲ್ವಿಚಾರಕ ಗಂಗಾಧರ, ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಗೌರವಾಧ್ಯಕ್ಷರಾದ ಶ್ರೀಪತಿ ಭಟ್, ಭಜನಾ ಮಂದಿರದ ಅಧ್ಯಕ್ಷ ರತ್ನಾಕರ ರೈ , ಪರಿವಾರಕಾನ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಸರಳಿಕುಂಜ, ಅರಂಬೂರು ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ, ಪೂಜಾ ಸಮಿತಿಯ ಅಧ್ಯಕ್ಷೆ ಶೋಭಾ ಮತ್ತು ಎರಡು ಒಕ್ಕೂಟಗಳ ಪದಾಧಿಕಾರಿಗಳು, ಅರಂಬೂರು ಒಕ್ಕೂಟದ ಸೇವಾ ಪ್ರತಿನಿಧಿ ವಿಜಯಶ್ರೀ, ಪರಿವಾರಕಾನ ಒಕ್ಕೂಟದ ಸೇವಾ ಪ್ರತಿನಿಧಿ ಸುರೇಶ, ಎರಡೂ ಒಕ್ಕೂಟದ ಪದಾಧಿಕಾರಿಗಳು ಸರ್ವ ಸದಸ್ಯರುಗಳು ಹಾಗೂ ಊರಿನ ಭಕ್ತಾಭಿಮಾನಿಗಳು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.