ಹರಿಹರ ಪಲ್ಲತ್ತಡ್ಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

0

ಸಾರ್ವಜನಿಕ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇವರ ವತಿಯಿಂದ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.15ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಆರಂಭದಲ್ಲಿ ಶ್ರೀ ದೇವರ ಸನ್ನಿದಿಯಲ್ಲಿ ಆಮಂತ್ರಣ ಪತ್ರಿಕೆ ಇರಿಸಿ, ವಿಶೇಷ ಪ್ರಾರ್ಥನೆ ನೆರವೇರಿಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಗೌರವಾದ್ಯಕ್ಷರಾದ ಕಿಶೋರ್ ಕೂಜುಗೋಡು, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಪ್ರಸನ್ನ ಗೋರ್ತಿಲ, ಹಾಗು ವಿವಿದ ಸಮಿತಿಯ ಸದಸ್ಯರುಗಳು ಹಾಗು ಊರ ಭಕ್ತಾದಿಗಳು ಹಾಜರಿದ್ದರು