ಅಡ್ಪಂಗಾಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಸಂಕ್ರಮಣ ಪೂಜೆ, ಸನ್ಮಾನ

0

ಅಡ್ಪಂಗಾಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಸಿಂಹ ಸಂಕ್ರಮಣದ ಪ್ರಯುಕ್ತ ಪೂಜಾ ಕಾರ್ಯ ಹಾಗೂ ಸನ್ಮಾನ ಕಾರ್ಯಕ್ರಮ ಆ. 19ರಂದು ಕ್ಷೇತ್ರದ ಧರ್ಮದರ್ಶಿ ಮತ್ತು ಗುರುಸ್ವಾಮಿಗಳಾದ ಶಿವಪ್ರಕಾಶ್ ಅಡ್ಪಂಗಾಯ ರವರ ನೇತೃತ್ವದಲ್ಲಿ ನಡೆಯಿತು.

ಬೆಳಿಗ್ಗೆ ಪುರೋಹಿತರಾದ ಗಿರೀಶ್ ಭಟ್ ನೇತೃತ್ವದಲ್ಲಿ ಗಣಪತಿ ಹಾವನ ಹಾಗೂ ವೈದಿಕ ಕಾರ್ಯಕ್ರಮ ನಡೆಯಿತು. ಸಂಜೆ ದುರ್ಗಾ ಪೂಜೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ, ಸುಳ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಬಳಿಕ ಶಿವಪ್ರಕಾಶ್ ಗುರುಸ್ವಾಮಿಯವರಿಂದ ಅಯ್ಯಪ್ಪ ಸ್ವಾಮಿಯ ದರ್ಶನ ಸೇವೆಯೊಂದಿಗೆ ಮಹಾಮಂಗಳಾರತಿ ನಡೆಯಿತು.

ಈ ಸಂದರ್ಭದಲ್ಲಿ ವಾಸ್ತುಶಿಲ್ಪಿ, ಅಜ್ಜಾವರದ ಬಯಂಬು ವೆಂಕಟಕೃಷ್ಣ ಆಚಾರ್ಯ ಮತ್ತು ಸುದ್ದಿ ಪತ್ರಿಕೆಯ ವರದಿಗಾರ ಕೆಟಿ ಬಾಗೇಶ್ ಕೊಯಿಕುಳಿಯವರನ್ನು ಸನ್ಮಾನಿಸಲಾಯಿತು. ಪೂಜಾ ಕಾರ್ಯಕ್ರಮದ ಬಳಿಕ ಪ್ರಸಾದ್ ವಿತರಣೆ, ಅನ್ನ ಸಂಪರ್ಕ ನಡೆಯಿತು. ಆ. 20ರಂದು ಗುರುಸ್ವಾಮಿಯವರು ತಮ್ಮ ತಂಡದೊಂದಿಗೆ ಶಬರಿಮಲೆ ಯಾತ್ರೆ ಕೈಗೊಂಡರು.