ಆ 22 : ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ತಾಲೂಕು ಸಮಿತಿ ರಚನಾ ಸಭೆ

0

ತಾಲೂಕಿನ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಉಪಾಧ್ಯಕ್ಷರು ಭಾಗವಹಿಸಲು ಮನವಿ

ಸರಕಾರಿ ಶಾಲೆಗಳು ಉಳಿಯಲಿ ಬೆಳೆಯಲಿ ನೆರೆ ಹೊರೆಯ ಸಮಾನ ಶಾಲೆಗಳಾಗಲಿ ಎಂಬ ನಿಟ್ಟಿನಲ್ಲಿ
ದ.ಕ ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಮಟ್ಟದ ಸಮಿತಿ ರಚನೆಯನ್ನು ಆ 22 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಶಿವ ಕೃಪಾ ಕಲಾಮಂದಿರ ರಚನೆ ಮಾಡಲು ತೀರ್ಮಾನಿಸಲಾಗಿದೆ.

ಆದ್ದರಿಂದ ಸುಳ್ಯ ತಾಲೂಕಿನ ಎಲ್ಲಾ ಸರಕಾರಿ ಶಾಲೆಗಳ ಮತ್ತು ಅನುದಾನಿತ ಶಾಲೆಗಳ ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಬಂಧು ಭಾಗವಹಿಸಬೇಕಾಗಿ ಕರ್ನಾಟಕ ರಾಜ್ಯ ಎಸ್ ಡಿಎಂಸಿ ಸಮನ್ವಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಉಪಾಧ್ಯಕ್ಷರು ರಾಜೇಶ್ವರಿ ಕಾಡುತೋಟ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.