ದೇವರಕೊಲ್ಲಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ದೇವರಕೊಲ್ಲಿಯಲ್ಲಿ ಆ.20ರಂದು ರಾತ್ರಿ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬೆಂಗಳೂರಿನ ರಮೇಶ್ ಎಂಬವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಪಲ್ಟಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದರು.


ಅವರನ್ನು ಸಂಪಾಜೆಯ ತಾಜ್ ಟರ್ಲಿ ಅವರ ಅಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದ್ದು, ಕಾರು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.