ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಚಿಕ್ಕಮಗಳೂರು ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಕೃಷಿ ಯೋಗ ಮಂದಿರ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು ಇವರು ಆಯೋಜಿಸಿರುವ 5ನೇ ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ 2024ರ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ 10 ರಿಂದ 14 ವರ್ಷದ ಬಾಲಕಿಯರ ಆರ್ಟಿಸ್ಟಿಕ್ ವಿಭಾಗದಲ್ಲಿ ಹಾರ್ದಿಕ ಕೆರೆಕ್ಕೋಡಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರು ಕುಶಾಲಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ.


10 ರಿಂದ 14 ವರ್ಷದ ಬಾಲಕರ ಆರ್ಟಿಸ್ಟಿಕ್ ವಿಭಾಗದಲ್ಲಿ ತನುಷ್ ಮೋಂಟಡ್ಕ ಚತುರ್ಥ ಸ್ಥಾನವನ್ನು ಪಡೆದಿರುತ್ತಾರೆ. ಇವರು ಉಬರಡ್ಕ ಗ್ರಾಮದ ಹರೀಶ್ ಮೋಂಟಡ್ಕ ಹಾಗೂ ಭವಾನಿ ದಂಪತಿಗಳ ಪುತ್ರ.


14  ರಿಂದ 18 ವರ್ಷದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಕ್ಷಮ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ಅಜ್ಜಾವರ ಗ್ರಾಮದ ತೀರ್ಥರಾಮ ಮುಡೂರು ಹಾಗೂ  ಪೂರ್ಣಿಮಾ ಎ ಜೆ ದಂಪತಿಗಳ ಪುತ್ರಿ. ಇವರು ಸುಳ್ಯ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಯೋಗ ಗುರು ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜ ರವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.