ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯ ಕೆ.ಪಿ‌. ಜಾನಿ ಅವರಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ

0

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾದ ಕೆ.ಪಿ.ಜಾನಿಯವರು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಆ.21ರಂದು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಕುಂಞ ಗೂನಡ್ಕ, ಕಾರ್ಮಿಕ ಮುಖಂಡ ವಸಂತ ಗೌಡ ಪೆಲ್ತಡ್ಕ ಹಾಗೂ ಸುಳ್ಯದ ಸಂವಿಧಾನ ಬದ್ಧ ಸಮಾನ ಮನಸ್ಕರ ಬಳಗದ ಸಂಚಾಲಕರಾದ ಎ.ಕೆ.ಇಬ್ರಾಹಿಂ ಕಲ್ಲುಗುಂಡಿ ಅವರು ಉಪಸ್ಥಿತರಿದ್ದರು.