ಕಳಂಜ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

0

ಕಳಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2023-24ನೇ ಸಾಲಿನಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪ್ರಶಸ್ತಿ ಲಭಿಸಿದೆ.


ಸಂಘದ ಅಧ್ಯಕ್ಷರಾದ ಎಂ. ಕೂಸಪ್ಪ ಗೌಡ ಮುಗುಪ್ಪು, ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು, ನಿರ್ದೇಶಕರಾದ ಎನ್. ವಿಶ್ವನಾಥ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ಇವರು ಮಂಗಳೂರಿನಲ್ಲಿ ಆ.14ರಂದು ನಡೆದ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.