ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ. ಜಾನಕಿ ವೆಂಕಟ್ರಮಣ ಗೌಡರ ಪುಣ್ಯತಿಥಿ ಆಚರಣೆ

0

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಡಾ.ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ. ಜಾನಕಿ ವೆಂಕಟ್ರಮಣ ಗೌಡರ 12ನೇ ವರ್ಷದ ಪುಣ್ಯ ತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ್ ನಲ್ಲಿ ಆ. 22ರಂದು ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ದೀಪ ಬೆಳಗಿಸಿ, ಪುಷ್ಪ ನಮನಗೈದು ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಎಡ್ವೈಸರ್ ಪ್ರೊ.ದಾಮೋದರ ಗೌಡ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಕೆವಿಜಿ ಆಯುರ್ವೇದ ಫಾರ್ಮಾ ಮತ್ತು ಸಂಶೋಧನಾ ಘಟಕದ ಕಾರ್ಯನಿರ್ವಾಹಣಾಧಿಕಾರಿ ಡಾ. ಪುರುಷೋತ್ತಮ ಕೆ.ಜಿ., ಕೆವಿಜಿ ಆಯುರ್ವೇದ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ.ಸನತ್ ಕುಮಾರ್ ಡಿ.ಜಿ., ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದ್ರವ್ಯಗುಣ ವಿಭಾಗದ ಪ್ರೊಫೆಸರ್ ಡಾ. ಕವಿತಾ ಬಿ. ಯಂ., ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.