ಮಂಡೆಕೋಲು : ಗಣೇಶೋತ್ಸವ ಆಮಂತ್ರಣ ಬಿಡುಗಡೆ

0

ಮಂಡೆಕೋಲು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಆ.24ರಂದು ಮಂಡೆಕೋಲು ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಉದಯಕುಮಾರ್ ಆಚಾರ್, ಪ್ರಧಾನ ಕಾರ್ಯದರ್ಶಿ ವಿನುತಾ ಪಾತಿಕಲ್ಲು, ಮಂಡೆಕೋಲು ದೇವಸ್ಥಾನದ ವ್ಯವಸ್ಥಾಪನಾ‌ಸಮಿತಿ ಮಾಜಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಶಿವಪ್ರಸಾದ್ ಉಗ್ರಾಣಿಮನೆ, ಸುರೇಶ್ ಕಣೆಮರಡ್ಕ, ಧನಂಜಯ ಉಗ್ರಾಣಿಮನೆ, ಸುನಿಲ್ ಪಾತಿಕಲ್ಲು, ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಕಾರ್ಯದರ್ಶಿ ಸೀತಾರಾಮ, ದಾಮೋದರ ಪಾತಿಕಲ್ಲು ಮೊದಲಾದವರು ಇದ್ದರು.