ಸೆ.26: ಜಾಲ್ಸೂರಿನಲ್ಲಿ 37ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

0

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 37ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆಯು ಪಯಸ್ವಿನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆ.26ರಂದು ನಡೆಯಲಿದೆ.

ಕಾರ್ಯಕ್ರಮವನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನಿಶಾಂತ್ ಮೋಂಟಡ್ಕ ಅವರು ಉದ್ಘಾಟಿಸಲಿದ್ದಾರೆ.

ಎಲ್ಲಾ ಸ್ಪರ್ಧೆಗಳು ಜಾಲ್ಸೂರು ಗ್ರಾಮಸ್ಥರಿಗೆ ಮಾತ್ರ ಮೀಸಲಾಗಿದ್ದು, ಅಂಗನವಾಡಿ ಪುಟಾಣಿ ಮಕ್ಕಳಿಗೆ ಕಪ್ಪೆ ಜಿಗಿತ, ಕಾಳು ಹೆಕ್ಕುವುದು, ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಪ್ಪೆ ಜಿಗಿತ, ಬಲೂನ್ ಒಡೆಯುವುದು, ಬಕೆಟ್ ಗೆ ಬಾಲ್ ಹಾಕುವುದು, ಹಿರಿಯ ಪ್ರಾಥಮಿಕ ಶಾಲಾ ಬಾಲಕರಿಗೆ ಕಬಡ್ಡಿ, ಮೂರು ಕಾಲಿನ ಓಟ, ಬಾಲಕಿಯರಿಗೆ ಮೂರು ಕಾಲಿನ ಓಟ, ಸಂಗೀತ ಕುರ್ಚಿ ನಡೆಯಲಿದೆ‌.

ಪ್ರೌಢಶಾಲಾ ಬಾಲಕರಿಗೆ ಮಡಿಕೆ ಒಡೆಯುವುದು, ಕಬಡ್ಡಿ, ಬಾಲಕಿಯರಿಗೆ ಸಂಗೀತ ಕುರ್ಚಿ, ಮೂರು ಕಾಲಿನ ಓಟ ನಡೆಯಲಿದೆ.

ಸಾರ್ವಜನಿಕ ಸ್ಪರ್ಧೆಯಲ್ಲಿ ಪುರುಷರಿಗೆ ಕಬಡ್ಡಿ, ಹಗ್ಗಜಗ್ಗಾಟ, ಮಡಿಕೆ ಒಡೆಯುವುದು ಹಾಗೂ ಮಹಿಳೆಯರಿಗೆ ಮಡಿಕೆ ಒಡೆಯುವುದು ಹಾಗೂ ಹಗ್ಗಜಗ್ಗಾಟ ನಡೆಯಲಿದೆ.
ಸ್ಪರ್ಧಾ ವಿಜೇತರಿಗೆ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ ಅವರು ಬಹುಮಾನ ವಿತರಿಸಲಿದ್ದಾರೆ. ಸಹಕಾರಿ ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು ಗೌರವ ಉಪಸ್ಥಿತರಿರಲಿದ್ದಾರೆ. ರಾತ್ರಿ ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿಶೇಷ ಭಜನೆ ನಡೆಯಲಿದೆ.