ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಸದ್ಭಾವನಾ ದಿನಾಚರಣೆ ಮತ್ತು ರಕ್ಷಾಬಂಧನ ಕಾರ್ಯಕ್ರಮ

0

ಸುಳ್ಯದ ಡಾ. ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ಸದ್ಭಾವನಾ ದಿನಾಚರಣೆ ಮತ್ತು ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸದ್ಭಾವನಾ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿ, ಪ್ರತಿಜ್ಜಾ ವಿಧಿ ಬೋದಿಸಿದರು ಇನ್ನೊರ್ವ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರಿ ಎನ್ .ಪಿ. ರಕ್ಷಾಬಂಧನದ ಮಹತ್ವದ ಬಗ್ಗೆ ಮಾತನಾಡಿದರು. ಸಮಾರಂಭದ ವೇದಿಕೆಯಲ್ಲಿ ರೆಡ್ ಕ್ರಾಸ್ ಮತ್ತು ಎನ್ ಎಸ್ ಎಸ್ ಘಟಕದ ನಾಯಕರುಗಳಾದ ದರ್ಶನ್ ಎಂ.ಪಿ, ಶನ್ಮಿತಾ, ಗೌತಮ್ ಜಿ, ಪ್ರಣಮ್ ವೈ ದೀಕ್ಷಿತಾ ಹಾಗೂ ಅಪೂರ್ವ ಉಪಸ್ಥಿತರಿದ್ದರು. ಸ್ವಯಂ ಸೇವಕಿಯರಾದ ಜೇಷ್ಮಾ ಎಸ್.ಬಿ ಸ್ವಾಗತಿಸಿ, ದೀಕ್ಷಿತಾ ಕೆ.ಸಿ ವಂದಿಸಿದರು. ಅಪೂರ್ವ ಕಾರ್ಯಕ್ರಮ ನಿರ್ವಹಿಸಿದರು.


ಸಭಾ ಕಾರ್ಯಕ್ರಮದ ನಂತರ ನೂತನ ಸ್ವಯಂಸೇವಕರನ್ನು ಸ್ವಾಗತಿಸಿ ಅವರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು.