ವಿನೋಬಾನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ರಾಧೆ – ಕೃಷ್ಣ ವೇಷ ತೊಟ್ಟು ಸಂಭ್ರಮಿಸಿದ ಪುಟಾಣಿ ಮಕ್ಕಳು

ಜಾಲ್ಸುರಿನ ವಿನೋಬಾನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ. 26 ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕೆ.ಎಫ್.ಡಿ.ಸಿ ನಿವೃತ್ತ ಅಧಿಕಾರಿ ಪಿ.ಎಂ.ರಂಗನಾಥ್ ರವರು ಜನ್ಮಾಷ್ಟಮಿ ಸಂಭ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಪದ್ಮಾ ರಂಗನಾಥ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಶಾಲಾ ಸಂಚಾಲಕ ಡಾ. ಗೋಪಾಲಕೃಷ್ಣ ಭಟ್, ಆಡಳಿತ ಸಮಿತಿ ಅಧ್ಯಕ್ಷ ನ. ಸೀತಾರಾಮ, ಶಾಲಾ ನಿಕಟಪೂರ್ವ ಸಂಚಾಲಕ ಸುಧಾಕರ ಕಾಮತ್ ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ಶಿಕ್ಷಕ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ,
ಶಿಶುಮಂದಿರದ ಮಾತಾಜಿ ಬೇಬಿಯವರು ವಂದಿಸಿದರು.

ಶಿಕ್ಷಕರಾದ ತೇಜಸ್ವಿ ಎಂ.ವಿ., ಅಶ್ವಿನಿ ಎನ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪೋಷಕರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.