ಸುಳ್ಯ : ಶ್ರೀ ಭಗವತೀ ಯುವ ಸೇವಾ ಸಂಘದಿಂದ ಬಂಟರ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

ಸುಳ್ಯ ಶ್ರೀ ಭಗವತೀ ಯುವ ಸೇವಾ ಸಂಘ ಬೂಡು – ಕೇರ್ಪಳ – ಕುರುಂಜಿಗುಡ್ಡೆ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಸಂಘ ಸುಳ್ಯ ಇದರ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ – ನಮ್ಮೂರ ಅಷ್ಟಮಿ – 2024 ಕಾರ್ಯಕ್ರಮ ಆ.26 ರಂದು ಬಂಟರ ಸಭಾಭವನದ ವಠಾರದಲ್ಲಿ ನಡೆಯಿತು.

ಭಗವತೀ ಯುವ ಸೇವಾ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಕೇರ್ಪಳ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ಬಂಟರ ಸಂಘದ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಕ್ರೀಡಾಂಗಣ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುಳ್ಯ ಸಿ.ಎ. ಬ್ಯಾಂಕ್ ನಿರ್ದೇಶಕ ಎನ್.ಎ.ರಾಮಚಂದ್ರ, ನಿವೃತ್ತ ಬ್ಯಾಂಕ್ ಅಧಿಕಾರಿ ಜನಾರ್ದನ ನಾಯ್ಕ್, ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ವಿಶ್ವ ಹಿಂದು ಪರಿಷತ್ – ಭಜರಂಗದಳ ಸಂಚಾಲಕ ವರ್ಷಿತ್ ಚೊಕ್ಕಾಡಿ, ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ,, ಬೂಡು ಕಾಲನಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೂಡು, ಬೂಡು ಅಂಗನವಾಡಿ ಕಾರ್ಯಕರ್ತೆ ಕು. ಕವಿತಾ ಬೂಡು ವೇದಿಕೆಯಲ್ಲಿ ಇದ್ದರು.

ಬೂಡು ರಾಧಾಕೃಷ್ಣ ರೈ ಸ್ವಾಗತಿಸಿದರು. ಕಿಶೋರ್ ಕುಮಾರ್ ಬೂಡು ವಂದಿಸಿದರು. ಕುಸುಮಾಧರ ಬೂಡು ಕಾರ್ಯಕ್ರಮ ‌ನಿರೂಪಿಸಿದರು.

ಸಂಜೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಕಾರ್ಯಕ್ರಮ ನಡೆಯಿತು.