ಉಬರಡ್ಕ: ಮರಣ ಸಾಂತ್ವನ ಧನ ಸಹಾಯ ವಿತರಣೆ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಾಗಿದ್ದು, ಆ‌.26ರಂದು ನಿಧನರಾದ ಸೂಂತೋಡು ಸೀತಾರಾಮ ರವರ ಮರಣ ಸಾಂತ್ವನ ನಿಧಿ ರೂ.9000/- ವನ್ನು ಮೃತರ ಪತ್ನಿ ಶ್ರೀಮತಿ ವಾರಿಜ ರವರಿಗೆ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆಯವರು ಆ.26 ರಂದು ವಿತರಿಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಪಿ.ಎಸ್ ಗಂಗಾಧರ್, ಸುರೇಶ್ ಎಂ.ಎಚ್, ಶ್ರೀಮತಿ ಲೀಲಾವತಿ ಬಳ್ಳಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.