ಕಾಯರ್ತೋಡಿ: ಮಿತ್ರ ಬಳಗದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗು ಅಭಿನಂದನಾ ಸಮಾರಂಭ

0

ರಾಜ್ಯ ಪ್ರಶಸ್ತಿ ಪುರಸ್ಕೃತ ಮಿತ್ರ ಬಳಗ ಕಾಯರ್ತೋಡಿ ಇದರ ವತಿಯಿಂದ 29ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಅಭಿನಂದನಾ ಸಮಾರಂಭವು ಆ.26ರಂದು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ದೇವಳದ ಪ್ರಧಾನ ಅರ್ಚಕ ನೀಲಕಂಠ ಭಟ್ ಅವರು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ, ಮೊಸರು ಕುಡಿಕೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಿತ್ರ ಬಳಗದ ಅಧ್ಯಕ್ಷ ದೇವಿ ಪ್ರಸಾದ್ ಎ. ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಸಿ.ಎ. ಬ್ಯಾಂಕ್ ನಿರ್ದೇಶಕಿ ಶ್ರೀಮತಿ ನವ್ಯ ಚಂದ್ರಶೇಖರ ಅಡ್ಪಂಗಾಯ, ಮಹಾ ವಿಷ್ಣು ದೇವಸ್ಥಾನದ ಆಡಳಿತ ಅಧಿಕಾರಿ ಚಂದ್ರಕಾಂತ್, ಶ್ರೀನಿಧಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಮೇದಪ್ಪ, ಮಿತ್ರ ಬಳಗದ ಪೂರ್ವ ಅಧ್ಯಕ್ಷ ವಾಸುದೇವ ಬೆಳ್ಳಿಪ್ಪಾಡಿ, ಗಾಂಧಿನಗರ ಕೆ.ಪಿ
ಎಸ್. ಕಾರ್ಯಧ್ಯಕ್ಷ ಚಿದಾನಂದ ಕುದ್ಪಾಜೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗಾಂಧಿನಗರ ಕೆ.ಪಿ.ಎಸ್ ಕಾರ್ಯಧ್ಯಕ್ಷರು ಹಾಗೂ ಮಿತ್ರ ಬಳಗದ ಪೂರ್ವ ಅಧ್ಯಕ್ಷರನ್ನು ಅಭಿನಂದಿಸಿ ಗೌರವಿಸಲಾಯಿತು.


ಮಿತ್ರ ಬಳಗದ ಸಾಂಸ್ಕೃತಿಕ ಕಾರ್ಯದರ್ಶಿ ಸಚಿನ್ ದೆಂಗೋಡಿ ಸ್ವಾಗತಿಸಿ, ಜಗದೀಶ್ ಕೆ.ಎಲ್. ವಂದಿಸಿದರು. ದೇವಿಪ್ರಸಾದ್ ಜಿ.ಸಿ. ಕಾರ್ಯಕ್ರಮ ನಿರೂಪಿಸಿದರು.