ಧೃತಿ ಕೆ. ವಿ. ಅವರಿಗೆ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬಹುಮಾನ

0

ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಇದರ ವತಿಯಿಂದ ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2024ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ , ಭಾರತದ ಭಾವೈಕ್ಯತೆ ಎನ್ನುವ ವಿಷಯದ ಕುರಿತು ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ ಇತ್ತೀಚೆಗೆ ಜ್ಞಾನ ನಿಲಯ ಬೆಳ್ತಂಗಡಿ ಯಲ್ಲಿ ನಡೆದಿತ್ತು.

ಈ ಸ್ಪರ್ಧೆ ಯಲ್ಲಿ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ಇದರ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಧೃತಿ ಕೆ. ವಿ. ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದಿದ್ದು ಮೂರು ಸಾವಿರ ರೂಪಾಯಿ ನಗದು ಹಾಗೂ ಫಲಕ, ಪ್ರಶಸ್ತಿ ಪತ್ರ ಬಹುಮಾನ ಪಡೆದಿರುತ್ತಾರೆ. ಇವರು ದೇವಚಳ್ಳ ಗ್ರಾಮದ ಕುಚ್ಚಾಲ ಮನೆ ವೆಂಕಟ್ರಮಣ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ.