ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಜ್ಞಾನ ನಾಟಕ ಸ್ಪರ್ಧೆ

0

ವಿದ್ಯಾಬೋಧಿನಿ, ರೋಟರಿ, ಕುಮಾರಸ್ವಾಮಿ ಶಾಲೆಗೆ ಬಹುಮಾನ

ಶಾಲಾ ಶಿಕ್ಷಣ ಇಲಾಖೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಆ.೨೮ ರಂದು ನಡೆಯಿತು.

ವಿಜ್ಞಾನ ನಾಟಕ ಸ್ಪರ್ಧೆಯನ್ನು ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಏಸುರಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶ್ರೀಮತಿ ಸಂಧ್ಯಾ ಕುಮಾರಿ, ಶಿಕ್ಷಕರ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಭಾರತಿ ದಿನೇಶ್, ನಾಟಕ ಸ್ಪರ್ಧೆಯ ತೀರ್ಪುಗಾರರಾದ ದುಗ್ಗಪ್ಪ ಗೌಡ ಕುಳ್ಳಂಪ್ಪಾಡಿ, ದಿನೇಶ್ ಕುಂದರ್, ವಸಂತ ಕೆ, ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಉಮೇಶ್ ನಿರೂಪಿಸಿದರು.

ಫಲಿತಾಂಶ

ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಐದು ಶಾಲೆಗಳು ಭಾಗವಹಿಸಿದ್ದು ಇದರಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ರೋಟರಿ ಪ್ರೌಢಶಾಲೆ ಸುಳ್ಯ, ತೃತೀಯ ಸ್ಥಾನವನ್ನು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪಡೆದುಕೊಂಡಿತು.