ಜಾಲ್ಸೂರು: ನಡುವಡ್ಕದಲ್ಲಿ ಬಸ್ಸು ತಂಗುದಾಣಕ್ಕೆ ಶಂಕುಸ್ಥಾಪನೆ

0

ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಡುವಡ್ಕದಲ್ಲಿ ಪ್ರಯಾಣಿಕರ ಬಸ್ಸು ತಂಗುದಾಣ ನಿರ್ಮಾಣಕ್ಕೆ ಆ.28ರಂದು ಶಂಕುಸ್ಥಾಪನೆ ನೆರವೇರಿಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾ. ಪಂ‌. ಪ್ರಭಾರ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಸದಸ್ಯರುಗಳಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಕೆ‌.ಎಂ. ಬಾಬು ಕದಿಕಡ್ಕ, ಪಿ‌.ಆರ್. ಸಂದೀಪ್ ಕದಿಕಡ್ಕ, ಶಿವಪ್ರಸಾದ್ ನೀರಬಸಿರು, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಗುತ್ತಿಗೆದಾರ ತಾಜುದ್ಧೀನ್, ಪಂಚಾಯತಿ ಸಿಬ್ಬಂದಿ ಚಿದಾನಂದ ದರ್ಖಾಸ್ತು, ಸ್ಥಳ ದಾನಿಗಳು ಮತ್ತು ಜಾಲ್ಸೂರು ಅಡ್ಕಾರು ಜುಮ್ಮಾ ಮಸೀದಿಯ ಪದಾಧಿಕಾರಿಗಳು ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.