ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾಗಿ ಮೋಹನ್ ರಾಂ ಸುಳ್ಳಿ

0

ಭಾರತೀಯ ಕಿಸಾನ್ ಸಂಘ ಇದರ ಸುಳ್ಯ ತಾಲೂಕು ಸಮಿತಿಯನ್ನು ರಚಿಸಲಾಯಿತು.

ತಾಲೂಕು ಸಮಿತಿಯ ಅಧ್ಯಕ್ಷರಾಗಿ ಮೋಹನ್ ರಾಂ ಸುಳ್ಳಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿ ಯಾಗಿ ಗಣೇಶ್ ಭಟ್ ತಂಟೆಪ್ಪಾಡಿ ಆಯ್ಕೆಯಾದರು.

ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬುಜಾಕ್ಷ, ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ರಾಯ, ಹಾಗೂ ಜಿಲ್ಲಾ ಮಹಿಳಾ ಪ್ರಮುಖರು ಶಾಂಭವಿಯವರು ಆಯ್ಕೆಯನ್ನು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ನಾರಾಯಣ ಸ್ವಾಮಿ ಯವರು ಸಮಿತಿಯ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕೃಷಿ ಪ್ರಶಸ್ತಿ ವಿಜೇತ ನವೀನ ಚಾತುಬಾಯಿ, ಕುಮ್ಕಿ ಹಕ್ಕು ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಜಿ. ಸತ್ಯನಾರಾಯಣ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 18 ಗ್ರಾಮಗಳಿಗೆ ಪ್ರಮುಖರನ್ನು ಆಯ್ಕೆ ಮಾಡಲಾಯಿತು.