ಪೈಂಬೆಚ್ಚಾಲು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ ವಿ.ಎಸ್. ಕುಂಚಡ್ಕ ರಿಗೆ ಬೀಳ್ಕೊಡುಗೆ ಸಮಾರಂಭ

0

ಆಲೆಟ್ಟಿ ಗ್ರಾಮದ ಪೈಂಬೆಚ್ಚಾಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ವಿಶಾಲಾಕ್ಷಿ ವಿ.ಎಸ್ ಕುಂಚಡ್ಕ ರವರು ಆ.31 ರಂದು ತನ್ನ ವೃತ್ತಿ ಸೇವೆಯಿಂದ ನಿವೃತ್ತಿ ಯಾಗಿದ್ದು ಅದೇ ದಿನ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಶಾಲೆಯ ಆವರಣದಲ್ಲಿ ಏರ್ಪಡಿಸಲಾಯಿತು.

ಶಾಲೆಯಎಸ್‌ಡಿ.ಎಂ.ಸಿ.ಅಧ್ಯಕ್ಷ ಅಬ್ದುಲ್ ಕುಂಞ ಪೈಂಬೆಚ್ಚಾಲು ಅಧ್ಯಕ್ಷತೆ ವಹಿಸಿದ್ದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ ರವರು ಅಭಿನಂದನಾ ಭಾಷಣ ಮಾಡಿದರು.


ಮುಖ್ಯ ಅತಿಥಿಗಳಾಗಿ
ಆಲೆಟ್ಟಿ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರು, ಶ್ರೀಮತಿ ಕುಸುಮ ಬಿಲ್ಲರಮಜಲು, ಧರ್ಮಪಾಲ ಕೊಯಿಂಗಾಜೆ,ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್,
ಸಮೂಹ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಸುನಿಲ್ ಕುಮಾರ್, ಪ್ರಗತಿಪರ ಕೃಷಿಕ ಪುರುಷೋತ್ತಮ ಕೋಲ್ಚಾರು, ನ್ಯಾಯವಾದಿ ಮೂಸಕುಂಞ ಪೈಂಬೆಚ್ಚಾಲು, ಸುದರ್ಶನ್ ಪಾತಿಕಲ್ಲು,ಖಾದರ್ ತೋಟ ಕೊಚ್ಚಿ, ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕರುಣಾಕರ ಹಾಸ್ಪಾರೆ ಉಪಸ್ಥಿತರಿದ್ದರು.

ನಿವೃತ್ತ ಮುಖ್ಯ ಶಿಕ್ಷಕಿ
ಶ್ರೀಮತಿ ವಿಶಾಲಾಕ್ಷಿ ವಿ.ಎ ಸ್ ಮತ್ತು ನಿವೃತ್ತ ಮುಖ್ಯ ಶಿಕ್ಷಕ ಕೊರಗಪ್ಪ ಮಾಸ್ತರ್ ಕುಂಚಡ್ಕ ದಂಪತಿಯನ್ನು ಶಾಲು, ಹಾರ, ಸ್ಮರಣಿಕೆ, ಫಲಪುಷ್ಪ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ಶಿಕ್ಷಕಿ ಶ್ರೀಮತಿ ಪ್ರತಿಮಾ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ಅಂಜಲಿ ವಂದಿಸಿದರು.
ದೈಹಿಕ ಶಿಕ್ಷಕ ಧನಂಜಯ ಇಡ್ಯಡ್ಕ ನಿರೂಪಿಸಿದರು.
ಊರಿನ ವಿದ್ಯಾಭಿಮಾನಿಗಳು ಸನ್ಮಾನಿಸಿದರು.
ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಎಸ್.ಡಿ.ಎಂ.ಸಿ.ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದರು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ವಾದ್ಯ ಘೋಷದೊಂದಿಗೆ ನಿವೃತ್ತ ಶಿಕ್ಷಕಿ ಯವರನ್ನು ಬೀಳ್ಕೊಡಲಾಯಿತು. ಆಗಮಿಸಿದ ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.