ಜಟ್ಟಿಪಳ್ಳ : ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮಕ್ಕೆ ಚಾಲನೆ

0


ಜಟ್ಟಿಪಳ್ಳ ಕಪಿಲ ಯುವಕ ಮಂಡಲ ,ಮಾನಸ ಮಹಿಳಾ ಮಂಡಲ ಇದರ ಆಶ್ರಯದಲ್ಲಿ 34 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಸೆ.1 ರಂದು ಜಟ್ಟಿಪಳ್ಳ ಶಾಲಾ ವಠಾರದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಶ್ರೀರಾಮ ಭಜನಾ ಸೇವಾ ಸಮಿತಿ ಅಧ್ಯಕ್ಷ ಹರಿಶ್ಚಂದ್ರ ಎಂ ಆರ್ ಉದ್ಘಾಟಿಸಿದರು.
ಮಹಿಳಾ ಮಂಡಲ ಅಧ್ಯಕ್ಷೆ ಚಿತ್ರಲೇಖಾ ಮಡಪ್ಪಾಡಿ ಅಧ್ಯಕ್ಷತೆ ವಹಿಸಿದರು.
ಕಪಿಲ ಯುವಕ ಮಂಡಲ ಕಟ್ಟಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಘುನಾಥ್ ಜಟ್ಟಿಪಳ್ಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಬಗ್ಗೆ ಮಾತನಾಡಿದರು.


ಕಪಿಲ ಯುವಕ ಮಂಡಲ ಅಧ್ಯಕ್ಷ ಹರೀಶ್ ಜೆ ಬಿ ಮೊದಲಾದವರು ಉಪಸ್ಥಿತರಿದ್ದರು.
ಮಾನಸ ಮಹಿಳಾ ಮಂಡಲದ ಸವಿತಾ ಲಕ್ಷಣ ಆಚಾರ್ಯ ಪ್ರಾರ್ಥಿಸಿದರು.
ಯುವಕ ಮಂಡಲ ಮಾಜಿ ಅಧ್ಯಕ್ಷ ವಿಪಿನ್ ಕರ್ಕೆರಾ ಸ್ವಾಗತಿಸಿ, ನ್ಯಾಯವಾದಿ ತನುದೀಪ್ ಪೆಲ್ತಡ್ಕ ಕಾರ್ಯಕ್ರಮ ನಿರೂಪಿಸಿ, ಮಾನಸ ಮಹಿಳಾ ಮಂಡಲದ ಸುನೀತಾ ವಂದನಾರ್ಪಣೆ ಮಾಡಿದರು.
ಉದ್ಘಾಟನ ಸಮಾರಂಭದ ಬಳಿಕ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಲಾಯಿತು.