ಬೆಳ್ಳಾರೆಯಲ್ಲಿ ಸ್ನೇಹಿತರ ಕಲಾ ಸಂಘದ ಶ್ರೀಕೃಷ್ಣ ಜನ್ಮಾಷ್ಠಮಿ, ಗುರುರತ್ನ ಪ್ರಶಸ್ತಿ ಪ್ರದಾನ, ಸನ್ಮಾನ

0

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 26ನೇ ವರ್ಷದ ಮೊಸರುಕುಡಿಕೆ ಕಾರ್ಯಕ್ರಮ ಆ. 31 ಮತ್ತು ಸೆ. 1ರಂದು ಬೆಳ್ಳಾರೆಯಲ್ಲಿ ನಡೆಯಿತು.

ಸೆ. 1ರಂದು ಬೆಳ್ಳಾರೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆಯಿಂದ ವಿವಿಧ ಕ್ರೀಡಾ ಸ್ಪರ್ಧೆಗಳು, ಕೃಷ್ಣವೇಷ ಸ್ಪರ್ಧೆ, ಬಳಿಕ ಅಪರಾಹ್ನ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಪದ್ಮನಾಭ ಬೀಡುರವರ ಅಧ್ಯಕ್ಷತೆಯಲ್ಲಿ ಸಭಾ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್ ಮನ್ಮಥ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್. ರೈ, ಸುಳ್ಯ ಎಪಿಎಂಸಿ ಮಾಜಿ ಅಧ್ಯಕ್ಷ ಸಂತೋಷ್ ಜಾಕೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಚಂದ್ರಶೇಖರ ರೈ ಭಜನಿ, ಜೈದೇವಿ ಟೆಕ್ಸ್ ಟೈಲ್ಸ್ ಬೆಳ್ಳಾರೆ ಇದರ ಮಾಲಕರಾದ ಪುಕಾರಾಂ ರಾಥೋರ್ ಅತಿಥಿಗಳಾಗಿ ಭಾಗವಹಿಸಿದ್ದರು.

ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಬೆಳ್ಳಾರೆ ಇದರ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಡ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ ವಿ ಯವರಿಗೆ ಗುರುರತ್ನ ಪ್ರಶಸ್ತಿ, ಸಾಮಾಜಿಕ‌ ಸೇವೆಗಾಗಿ ಮಿಥುನ್ ಶೆಣೈ ಬೆಳ್ಳಾರೆ ಹಾಗೂ ದೇಶಸೇವೆಗಾಗಿ ನಿವೃತ್ತ ಯೋಧ ಗಣೇಶ್ ಮಡ್ತಿಲರಿಗೆ ಸನ್ಮಾನ ಹಾಗೂ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಹೇಮಂತ್ ರವರಿಗೆ ಅಭಿನಂದನೆ ನಡೆಯಿತು. ಶ್ರೀಮತಿ ನಳಿನಿಯವರ ಸನ್ಮಾನ ಪತ್ರವನ್ನು ಚಂದ್ರಹಾಸ ಮಣಿಯಾಣಿ, ಮಿಥುನ್ ಶೆಣೈಯವರ ಸನ್ಮಾನ ಪತ್ರವನ್ನು ಚೇತನ್ ಪಡ್ಪು, ಗಣೇಶ್ ಮಡ್ತಿಲರ ಸನ್ಮಾನ ಪತ್ರವನ್ನು ಬಾಲಕೃಷ್ಣ ತಡಗಜೆ, ಬಿ.ಎಸ್. ಕಿಶನ್ ದ್ರಾವಿಡ್ ಸನ್ಮಾನ ಪತ್ರವನ್ನು ಮಹಾಲಿಂಗ ಪಾಟಾಳಿ ಕುರುಂಬುಡೇಲು, ಹೇಮಂತ್ ರ ಸನ್ಮಾನ ಪತ್ರವನ್ನು ಶ್ರೀನಿವಾಸ ಕುರುಂಬುಡೇಲು ವಾಚಿಸಿದರು.

ಸಂಘದ ಪೂರ್ವಾಧ್ಯಕ್ಷ ಚಂದ್ರಶೇಖರ ಪನ್ನೆ ಸ್ವಾಗತಿಸಿ ಪೂರ್ವಾಧ್ಯಕ್ಷ ವಸಂತ ಉಲ್ಲಾಸ್ ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸ್ಪರ್ಧಾ ಕಾರ್ಯಕ್ರಮಗಳು ಮುಂದುವರಿಯಿತು.