ಕಳಂಜ : ಕಲಾ ವಿಕಾಸದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಕಾರ್ಯಕ್ರಮ

0

ಕಲಾ ವಿಕಾಸದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 33 ನೇ ವರ್ಷದ ಆಚರಣೆ ಅಂಗವಾಗಿ ವಿವಿಧ ಆಟೋಟ ಕಾರ್ಯಕ್ರಮ ಆ. 1 ರಂದು ಕಳಂಜ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಬೆಳಗ್ಗೆಯಿಂದ ಸಂಜೆ ತನಕ ಪುಟಾಣಿ ಮಕ್ಕಳಿಗೆ ಶ್ರೀಕೃಷ್ಣನ ವೇಷ, ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವೇದಿಕೆಯಲ್ಲಿ ಕಲಾವಿಕಸದ ಮಾಜಿ ಅಧ್ಯಕ್ಷ ರುಕ್ಮಯ್ಯ ಗೌಡ ಕಟ್ಟತಾರು, ವಿಷ್ಣುಮೂರ್ತಿ ಸೇವಾ ಟ್ರಸ್ಟ್ ಅಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು, ಗ್ರಾ. ಪಂ ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ಕಲಾವಿಕಾಸದ ಅಧ್ಯಕ್ಷ ಲೋಹಿತ್ ಕಟ್ಟತ್ತಾರು, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ ವೇದಿಕೆಯಲ್ಲಿ ಉಪಸ್ಥಿತರಿದ್ದು ಬಹುಮಾನ ವಿತರಿಸಿದರು. ಜಗದೀಶ್ ಮುಂಡುಗಾರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗಿರಿಧರ ಕಳಂಜ ವಂದಿಸಿದರು.