ಸುಳ್ಯ ಪ್ರೆಸ್ ಕ್ಲಬ್ ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಭೇಟಿ

0

ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಇಂದು (ಸೆಪ್ಟಂಬರ್ 2) ರಂದು ಬೆಳಗ್ಗೆ ಸುಳ್ಯ ಪ್ರೆಸ್ ಕ್ಲಬ್ ಗೆ ಭೇಟಿ ನೀಡಿದರು.

ಕಾರ್ಯಕ್ರಮ ನಿಮಿತ್ತ ಸುಳ್ಯಕ್ಕೆ ಭೇಟಿ ನೀಡಿರುವ ಅವರು ಸುಳ್ಯ ಪ್ರೆಸ್ ಕ್ಲಬ್ ಗೆ ಭೇಟಿ ನೀಡಿದ ಸಂದರ್ಭ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರವರು ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬುಗೌಡ ಅಚ್ರಪ್ಪಾಡಿ, ಸಾಹಿತಿಗಳಾದ ಪೂವಪ್ಪ ಕಣಿಯೂರು, ಸುಂದರ ಕೇನಾಜೆ, ಪ್ರೆಸ್ ಕ್ಲಬ್ ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೆಟ್ಟಿ, ಖಜಾಂಜಿ ರಮೇಶ್ ನೀರಬಿದಿರೆ, ನಿರ್ದೇಶಕರುಗಳಾದ ದುರ್ಗಾಕುಮಾರ್ ನಾಯರ್ ಕೆರೆ, ಶರೀಫ್ ಜಟ್ಟಿಪಳ್ಳ, ಯಶ್ವಿತ್ ಕಾಳಮ್ಮನೆ, ಸದಸ್ಯರುಗಳಾದ ಕೆ.ಟಿ ಭಾಗೀಶ್, ಪುಷ್ಪರಾಜ್ ಪೆರುವಾಜೆ, ದಯಾನಂದ ಕಲ್ನಾರು, ಶ್ರೀಜಿತ್ ಸಂಪಾಜೆ ಮೊದಲಾದವರು ಉಪಸ್ಥಿತರಿದ್ದರು.