ನಾಳೆ ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ ವತಿಯಿಂದ ಮೊಸರು ಕುಡಿಕೆ ಉತ್ಸವ- ಅದ್ದೂರಿಯ ಶೋಭಾಯಾತ್ರೆ

0

ವಿಶ್ವ ಹಿಂದೂ ಪರಿಷದ್, ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ವತಿಯಿಂದ ನಾಳೆ ಸುಳ್ಯದಲ್ಲಿ ಅದ್ದೂರಿಯ ಮೊಸರು ಕುಡಿಕೆ ಉತ್ಸವವು ಜರುಗಲಿದೆ.

ಅಪರಾಹ್ನ ಗಂಟೆ 2.00 ರಿಂದ ವೀರ ಯುವಕರ ಅಟ್ಟಿ ಮಡಿಕೆ ಒಡೆಯುವ ಶೋಭಾಯಾತ್ರೆಯು ಆರಂಭವಾಗಲಿರುವುದು. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸುಳ್ಯದ ಪ್ರಮುಖ ಬೀದಿಗಳಲ್ಲಿ ಸುಮಾರು 17 ಕಡೆಗಳಲ್ಲಿ ಯುವಕರ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯ ಪ್ರದರ್ಶನ ವಾಗಲಿದೆ. ಸಂಜೆ ಚೆನ್ನಕೇಶವ ದೇವಸ್ಥಾನದ ಎದುರಿನಲ್ಲಿ ಧಾರ್ಮಿಕ ಸಭೆಯು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಮಾಜಿ ಸಂಸದ ಅಂಕಣಕಾರ ಪ್ರತಾಪ ಸಿಂಹ ರವರು ಆಗಮಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದೂ ಪರಿಷದ್ ನಿಕಟ ಪೂರ್ವ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ ಕಾರ್ಯಕ್ರಮ ಉದ್ಘಾಟಿಸಲಿರುವರು.