ಅರಂತೋಡು – ತೊಡಿಕಾನ ಸಹಕಾರಿ ಸಂಘ ಹಾಗೂ ಸಮೃದ್ಧಿ ಮಾರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ

0

ಸುಳ್ಯದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿರುವ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸುಳ್ಯಕ್ಕೆ ಬರುವ ದಾರಿಯಲ್ಲಿ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಹಕಾರಿ ಸಂಘದ ಸಮೃದ್ಧಿ ಮಾರ್ಟ್ ಗೆ ಸೆ.4ರಂದು ಅಪರಾಹ್ನ ಭೇಟಿ ನೀಡಿದರು.

ಸಹಕಾರಿ ಸಂಘಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ ಅವರನ್ನು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಉಪಾಧ್ಯಕ್ಷ ದಯಾನಂದ ಕುರುಂಜಿ, ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಸ್ವಾಗತಿಸಿದರು.

ಬಳಿಕ ಸಹಕಾರಿ ಸಂಘದ ಕಛೇರಿಗೆ ತೆರಳಿದ ಅವರು ಸಹಕಾರಿ ಸಂಘದ ವ್ಯವಹಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲಿಂದ ಸಹಕಾರಿ ಸಂಘದ ವತಿಯಿಂದ ನಡೆಸಲ್ಪಡುವ ಸಮೃದ್ಧಿ ಮಾರ್ಟ್ ಗೆ ಭೇಟಿ ನೀಡಿ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.