ಗೂನಡ್ಕ :ಕಾರು ಮತ್ತು ಬಸ್ ಮಧ್ಯೆ ಅಪಘಾತ, ಪ್ರಯಾಣಿಕರಿಗೆ ಗಾಯ ಆಸ್ಪತ್ರೆಗೆ ದಾಖಲು

0

ಮಾಣಿ ಮೈಸೂರು ಹೆದ್ದಾರಿ ಗೂನಡ್ಕ ಸಮೀಪ ಒಮ್ನಿ ಕಾರು ಮತ್ತು ಖಾಸಗಿ ಬಸ್ಸು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

ಕೇರಳದ ಕಾಂಞಗಾಡಿನಿಂದ ಬೆಂಗಳೂರಿಗೆ ಹೋಗುವ ಕೊಹಿನೂರು ಬಸ್ಸು ಮತ್ತು ಮಡಿಕೇರಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯವಾಗಿ ಸುಳ್ಯ ಆಸ್ಪತ್ರೆಗೆ ತರಲಾಗಿದೆ.

ಬಳಿಕ ಓರ್ವವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸುಳ್ಯ ಆಂಬ್ಯುಲೆನ್ಸ್ ಚಾಲಕ ಮಾಲಕ ಸಂಘದ ಶಿವ, ರಫೀಕ್, ತಾಜು ಟರ್ಲಿ ಸಹಕರಿಸಿದ್ದಾರೆ.