ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ

0

ಬೆಳ್ಳಾರೆಯಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಆಮಂತ್ರಣ ಪತ್ರಿಕೆಯಲ್ಲಿ ಆಮಂತ್ರಿತರಾಗಿ ಒಟ್ಟು 27 ಮಂದಿಯ ಹೆಸರಿತ್ತು. ಆದರೆ ಕಾರ್ಯಕ್ರಮಕ್ಕೆ ಬಂದವರು ಐವರು ಮಾತ್ರ !

ಶಿಷ್ಟಾಚಾರದಂತೆ ಮುಖ್ಯ ಅತಿಥಿಗಳಾಗಿ ವಿಧಾನ ಸಭಾ ಅಧ್ಯಕ್ಷರಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರವರೆಗೆ 22 ಮಂದಿಯ ಹೆಸರಿತ್ತು. ಆದರೆ ಕಾರ್ಯಕ್ರಮಕ್ಕೆ ಬಂದವರು ಶಾಸಕಿ ಕು. ಭಾಗೀರಥಿ ಮುರುಳ್ಯ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಯವರು ಮಾತ್ರ. ವಿಶೇಷವೆಂದರೆ ಬೆಳ್ಳಾರೆಯಲ್ಲಿ ನಡೆದ ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ಸದಸ್ಯರು ಕೂಡಾ ಆಗಮಿಸಿರಲಿಲ್ಲ.