ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನೂತನ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಅವಿರೋಧ ಆಯ್ಕೆ, ಉಪಾಧ್ಯಕ್ಷರಾಗಿ ಸಂಜೀವ ಅಡ್ಯಾರ್ ಆಯ್ಕೆ

0

ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನೂತನ ಅಧ್ಯಕ್ಷರಾಗಿ ಮಾತೃಭೂಮಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಪಂಪ್ ವೆಲ್ ನಲ್ಲಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಕಚೇರಿಯಲ್ಲಿ ಬುಧವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್‌ ಕುಮಾರ್‌ ಎಂ.ಎಸ್‌, ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು.