ಕಳಂಜ: ರಾಷ್ಟೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಅಭಿಯಾನ ಮಾಸಾಚರಣೆ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಗ್ರಾಮ ಪಂಚಾಯತ್ ಕಳಂಜ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀರಕ್ಷ ಗೊಂಚಲು ಸಮಿತಿ ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಅಯ್ಯನಕಟ್ಟೆ ಪಂ. ದೀನದಯಾಲ್ ಸಭಾಭವನದಲ್ಲಿ ಸೆ. 05ರಂದು ನಡೆಯಿತು.

ಕಳಂಜ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪ್ರೇಮಲತ ಕಾರ್ಯಕ್ರಮವನ್ನು ಉಧ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶ್ರೀರಕ್ಷ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ಮೇಲ್ವಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈಯವರು ಪೌಷ್ಟಿಕತೆಯ ಬಗ್ಗೆ ಮಾತಾಡಿ ಕಿಶೋರಿಯರಿಗೆ ಕಿವಿಮಾತುಗಳನ್ನು ನೀಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಳಂಜ ಗ್ರಾಮದ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಬೇಬಿ ಕೆ.ಸಿ. ಕಿಶೋರಿಯರಿಗೆ ಪೌಷ್ಠಿಕ ಆಹಾರಗಳ ಬಗ್ಗೆ ಮತ್ತು ರಕ್ತಹೀನತೆಯ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಶಿಲ್ಪ ಆರೋಗ್ಯಕರ ಹದಿಹರೆಯದವರ ಬಿಸಿಜಿ ಚುಚ್ಚುಮದ್ದಿನ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಅಂಗನವಾಡಿ ಪೋಷಕರು ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳಿಗೆ ಪೌಷ್ಟಿಕ ತಿನಿಸುಗಳ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆ ನಡೆಸಲಾಯಿತು. ಅಯ್ಯನಕಟ್ಟೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದೀಪ್ತಿ ಮತ್ತು ವಿಷ್ಣುನಗರ ಅಂಗನವಾಡಿ ಕಾರ್ಯಕರ್ತೆ ಎಂ. ಲಲಿತ ಉಪಸ್ಥಿತರಿದ್ದರು. ತಂಟೆಪ್ಪಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಯಶೋದ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯವರಿಂದ ಮಹಿಳೆಯರ ರಕ್ತ ಪರಶೀಲಿಸಲಾಯಿತು. ಸ್ತ್ರೀ ರಕ್ಷ ಗೊಂಚಲಿನ ಕಾರ್ಯದರ್ಶಿ ಶ್ರೀಮತಿ ರತ್ನಾವತಿ ಸ್ವಾಗತಿಸಿ ಸ್ತ್ರೀಶಕ್ತಿ ಸಂಘದ ಸದಸ್ಯೆ ವಿಶಾಲಾಕ್ಷಿ ವಂದಿಸಿದರು. ಕಾರ್ಯಕ್ರಮದಲ್ಲಿ ಪೋಷಕರು, ಸ್ತ್ರೀಶಕ್ತಿ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತರು ಹಾಜರಿದ್ದರು.