ಸುಳ್ಯ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

0


ಸುಳ್ಯದ ಶ್ರೀ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ನಮ್ಮ ದೇಶದ ಮಾಜಿ ರಾಷ್ಟ್ರಪತಿ ಸರ್ವಪಳ್ಳಿ ಡಾ. ರಾಧಾಕೃಷ್ಣರವರ ಜನ್ಮದಿನದ ಪ್ರಯುಕ್ತವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿದರು. ಸಮಾರಂಭದಲ್ಲಿ ಡಾ. ರಾಧಾಕೃಷ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ವಹಿಸಿದರು. ಉಪನ್ಯಾಸಕಿ ಸ್ವರ್ಣಕಲಾ.ಎ.ಎಸ್ ರವರು ಶಿಕ್ಷಕರ ದಿನಾಚರಣೆ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿಯರಾದ ಶ್ರಾವ್ಯ ಪ್ರಾರ್ಥಿಸಿ, ದ್ರವ್ಯ ಸ್ವಾಗತಿಸಿದರು. ಸೋನಾ ಕಾರ್ಯಕ್ರಮ ನಿರೂಪಿಸಿದರು.