ಸೆ.7 ರಂದು ಕುಲ್ಕುಂದ ಬಸವನ ಮೂಲೆಯಲ್ಲಿ 13 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸವನ ಮೂಲೆ ಕುಲ್ಕುಂದ ಇದರ ವತಿಯಿಂದ 13 ನೇ ವರ್ಷದ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. 7 ರಂದು
ಶ್ರೀ ಬಸವೇಶ್ವರ ದೇವಸ್ಥಾನ ಬಸವನಮೂಲೆಯಲ್ಲಿ ಜರಗಲಿರುವುದು.

ಪೂರ್ವಾಹ್ನ ಮೂರ್ತಿ ಪ್ರತಿಷ್ಠಾಪನೆ, ನಡೆದು ಮಹಾಗಣಪತಿ ಹೋಮ, ಬಸವೇಶ್ವರ ಭಜನಾ ಮಂಡಳಿ, ಭಜನಾ ಕಾರ್ಯಕ್ರಮ ನಡೆಯಲಿದೆ. ಕಲಾವಿದ ಯಜೇಶ್ ಆಚಾರ್ಯ ಇವರಿಂದ ಭಕ್ತಿ ಸಂಗೀತ ನಡೆದು ಮಧ್ಯಾಹ್ನ ಮಹಾಪೂಜೆ ಹಾಗೂ ಪರಿವಾರ ಸಹಿತ ಶ್ರೀ ಬಸವೇಶ್ವರ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಅಪರಾಹ್ನ 2.00 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಸಂಜೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆದು ಶ್ರೀ ಮಹಾಗಣಪತಿ ದೇವರ ಶೋಭಾಯಾತ್ರೆ ನಡೆದು ಮೂರ್ತಿ ವಿಸರ್ಜನೆ ನಡೆಯಲಿದೆ.