ಅಯ್ಯನಕಟ್ಟೆಯಲ್ಲಿ ಬೆಳ್ಳಾರೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆ

0

ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಭಾಂಗಣದಲ್ಲಿ ಬೆಳ್ಳಾರೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆ ಸೆ. 5ರಂದು ನಡೆಯಿತು. ಸಭೆಯಲ್ಲಿ ಬೂತ್ ಮಟ್ಟದಲ್ಲಿ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಹಾಗು ಪಕ್ಷದ ಅಭಿಮಾನಿ ಮತದಾರರನ್ನು ಸದಸ್ಯರನ್ನಾಗಿ ಆನ್ಲೈನ್ ಮೂಲಕ ನೋಂದಣಿ ಮಾಡುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ರಾವ್ ಕಿಲಂಗೋಡಿ, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಸದಸ್ಯ ಕಿಶನ್ ಜಬಲೆ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಯುವಮೋರ್ಚಾ ಜಿಲ್ಲಾ ಸದಸ್ಯ ಹರ್ಷಿತ್ ಪೆರುವಾಜೆ, ಮಂಡಲ ಯುವ ಮೋರ್ಚಾ ಕಾರ್ಯದರ್ಶಿ ನಿಖಿಲ್ ಮಡ್ತಿಲ, ಶಕ್ತಿ ಕೇಂದ್ರ ಪ್ರಮುಖರಾದ ಮಹೇಶ್ ಮೇರ್ಕಜೆ, ನಂದಕುಮಾರ್, ದಿಲೀಪ್ ಬೆಳ್ಳಾರೆ, ನಾರಾಯಣ ಕೊಂಡೆಪ್ಪಾಡಿ, ಚೇತನ್ ಕೆ, ಲೋಕೇಶ್ ಬರೆಮೇಲು ಮೊದಲಾದವರು ಉಪಸ್ಥಿತರಿದ್ದರು.