ಸುಳ್ಯ ಶ್ರೀ ರಾಮ ಮಂದಿರದಲ್ಲಿ ಗಣೇಶೋತ್ಸವ -ದಾನಿಗಳ ನಾಮಫಲಕ ಅನಾವರಣ

0

ಸುಳ್ಯ ಶ್ರೀ ರಾಮ ಮಂದಿರದಲ್ಲಿ ಸೆ.7 ರಂದು ಶ್ರೀ ಗಣೇಶೋತ್ಸವ ಕಾರ್ಯಕ್ರಮವು ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಜರುಗಿತು.
ಬೆಳಗ್ಗೆ ಗಂಟೆ 8.30 ಕ್ಕೆ ಗಣಹೋಮ, ಬಳಿಕ ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂಡಳಿ, ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು,ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ಹಾಗೂ ಬ್ರಹ್ಮಕಲಶೋತ್ಸವಕ್ಕೆ 10 ಸಾವಿರಕ್ಕಿಂತ ಮೇಲ್ಪಟ್ಟು ಧನ ಸಹಾಯ ನೀಡಿದ ಸೇವಾರ್ಥಿಗಳ ನಾಮಫಲಕವನ್ನು ಆಡಳಿತ ಸಮಿತಿ ಅಧ್ಯಕ್ಷ ಕೆ.ಉಪೇಂದ್ರ ಪ್ರಭು ರವರುಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯದರ್ಶಿ ನಾರಾಯಣ ಕೇಕಡ್ಕ, ಉಪಾಧ್ಯಕ್ಷ ಗೋಕುಲ್ ದಾಸ್ ಸುಳ್ಯ, ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀನಿವಾಸ, ಸದಸ್ಯರಾದ ಮಹಾಬಲ ಕೇರ್ಪಳ, ಭಾಸ್ಕರ ನಾಯರ್,ಗೋಪಾಲ ನಡುಬೈಲು, ಸಂದೇಶ್ ಕುರುಂಜಿ ಹಾಗೂ ಸುನಿಲ್ ‌ಕೇರ್ಪಳ, ಪ್ರಭಾಕರ ನಾಯರ್, ರಾಮಚಂದ್ರ ಭಟ್ , ಅನಿಲ್ ಕುಮಾರ್ ಕೇರ್ಪಳ, ಗಣೇಶ ,ಲಕ್ಷ್ಮಣ
ಉಪಸ್ಥಿತರಿದ್ದರು.

ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಂತರ ಭಜನಾ ಕಾರ್ಯಕ್ರಮ ಮುಂದುವರೆಯಿತು.