ಉಬರಡ್ಕದಲ್ಲಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ, ಗಣಪತಿ ಪ್ರತಿಷ್ಟೆ

0

ಶ್ರೀ ನರಸಿಂಹ ಶಾಸ್ತಾವು ದೇವಾಲಯ, ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಉಬರಡ್ಕ ಮಿತ್ತೂರು ಇದರ ವತಿಯಿಂದ 14 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು.

ಪೂರ್ವಾಹ್ನ ಸ್ಥಳ ಶುದ್ಧಿ, ಗಣಪತಿ ಪ್ರತಿಷ್ಟೆ, ಭಜನೆ, ದೇವಾಲಯದಲ್ಲಿ ಸಾರ್ವಜನಿಕ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.