ಉಬರಡ್ಕ: ಮರಣ ಸಾಂತ್ವನ ಧನ ಸಹಾಯ ವಿತರಣೆ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಾಗಿದ್ದು, ಸೆ.7 ರಂದು ನಿಧನರಾದ ರಾಘವ ಕೈಪೆ ಮಂಚದಕಲ್ಲು ರವರ ಮರಣ ಸಾಂತ್ವನ ನಿಧಿ ರೂ.9000/- ವನ್ನು ಮೃತರ ಪತ್ನಿ ದೇವಕಿ, ಪುತ್ರರಾದ ಪುರುಷೋತ್ತಮ, ಲೋಕೇಶ್, ಪುತ್ರಿ ಕವಿತಾ ವರಿಗೆ ಸೆ.7 ರಂದು ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆಯವರು ವಿತರಿಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಪಿ.ಎಸ್ ಗಂಗಾಧರ್, ಸುರೇಶ್ ಎಂ.ಎಚ್, ವಿಜಯಕುಮಾರ್ ಉಬರಡ್ಕ, ಹರಿಪ್ರಸಾದ್ ಪಾನತ್ತಿಲ, ಸಂಘದ ಸದಸ್ಯರಾದ ಚಂದ್ರಶೇಖರ ಗೌಡ ಪಾನತ್ತಿಲ ಮತ್ತು ತಿಮ್ಮಯ್ಯ ಬೈತ್ತಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.